ಪ್ರೀತಿಯ ಅಂತ್ಯ

 love6[1]

   ಒಂದು ಸುಂದರವಾದ ದ್ವೀಪವಿತ್ತು. ಅಲ್ಲಿ ಎಲ್ಲಾ ಭಾವನೆಗಳೂ ಸಾಮರಸ್ಯದಿಂದ ಬಾಳುತ್ತಿದ್ದವು. ಒಂದು ದಿನ ದೊಡ್ಡ ಪ್ರವಾಹ ಬಂದು ದ್ವೀಪ ಮುಳುಗುವ ಸ್ಥಿತಿ ಉಂಟಾಯಿತು. ಎಲ್ಲಾ ಭಾವನೆಗಳೂ ಜೀವಭಯದಿಂದ ತತ್ತರಿಸಿದವು. ಜೀವ ಉಳಿಸಿಕೊಳ್ಳಲು ಪರದಾಡಿದವು. ಆಗ ಪ್ರೀತಿ ಒಂದು ದೋಣಿಯನ್ನು ಸಿದ್ಧಪಡಿಸಿತು. ಎಲ್ಲಾ ಭಾವನೆಗಳೂ ಜೀವ ಉಳಿದರೆ ಸಾಕೆಂದುಗಡಿಬಿಡಿಯಲ್ಲಿ ದೋಣಿ ಎರಿದವು. ಒಂದು ಭಾವನೆ ಮಾತ್ರ ದೋಣಿಯಲ್ಲಿ ಕಾಣಲಿಲ್ಲ. ಪ್ರೀತಿ ದೋಣಿ ಇಳಿದು ಬಂದು ನೋಡಿದರೆ ದುರಭಿಮಾನ ಮುಖ ಊದಿಸಿಕೊಂಡು ಒಂದುಕಡೆ ಕುಳಿತಿತ್ತು. ಅದನ್ನು ದೋಣಿ ಹತ್ತಲು ಪ್ರೀತಿ ಒತ್ತಾಯಿಸಿದರೂ ಅದು ಹತ್ತಲಿಲ್ಲ. ಪರಿಪರಿಯಾದ ಓಲೈಕೆಗೂ ಅದು ಜಗ್ಗಲಿಲ್ಲ. ಪ್ರವಾಹ ಏರುತ್ತಲೇ ಇತ್ತು. ಉಳಿದ ಭಾವನೆಗಳು ದುರಭಿಮಾನವನ್ನು ಅಲ್ಲೇ ಬಿಟ್ಟು ದೋಣಿ ಹತ್ತಿ ಜೀವ ಉಳಿಸಿಕೊಳ್ಳಲು ಪ್ರೀತಿಯನ್ನು ಕೇಳಿಕೊಂಡವು. ಪ್ರೀತಿ ದುರಭಿಮಾನವನ್ನು ಪ್ರೀತಿಯಿಂದ ದೋಣಿ ಹತ್ತಲು ಕೇಳಿಕೊಳ್ಳುತ್ತಲೇ ಇತ್ತು. ಪ್ರವಾಹ ಹೆಚ್ಚಾಗಿ ದ್ವೀಪ ಮುಳುಗಿ ದುರಭಿಮಾನದೊಂದಿಗೆ ಪ್ರೀತಿಯೂ ಸತ್ತುಹೋಯಿತು.
-ಕ.ವೆಂ.ನಾಗರಾಜ್.

2 thoughts on “ಪ್ರೀತಿಯ ಅಂತ್ಯ”

  1. ತುಂಬಾ ಚೆನ್ನಾಗಿದೆ,
    ಕತೆ ಸಣ್ಣದು, ಅರ್ಥ ನಿಜವಾಗಿಯೂ ದೊಡ್ಡದು.

Leave a Reply to pramodlns Cancel Reply

Your email address will not be published. Required fields are marked *

Scroll to Top